ಜಿಲ್ಲಾ ಸುದ್ದಿ

ಆಸ್ತಿಗಾಗಿ ಸಹೋದರಿಯನ್ನೇ ಕೊಂದ ಅಣ್ಣ!

Share News

ಆಸ್ತಿಗಾಗಿ ಸಹೋದರಿಯನ್ನೇ ಕೊಂದ ಅಣ್ಣ!

ಗದಗ:ಸತ್ಯಮಿಥ್ಯ (ಸ-24)

ಆಸ್ತಿಗಾಗಿ ಅಣ್ಣನಿಂದ ತಂಗಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹೇಮರೆಡ್ಡಿ ಮಲ್ಲಮ್ಮ ನಗರದಲ್ಲಿ ನಡೆದಿದೆ. ಕಾವ್ಯಾ (32) ಮೃತ ಮಹಿಳೆಯಾಗಿದ್ದು, ತಂಗಿಯನ್ನು ಚಾಕುವಿನಿಂದ ಇರಿದು ಕೊಂದು ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ.

ಈಶಪ್ಪ ಕ್ಯಾದಗಿಹಳ್ಳಿ ಎಂಬಾತನಿಂದ ಕೃತ್ಯ ನಡೆದಿದ್ದು, . ಆಸ್ತಿ ವ್ಯಾಜ್ಯ ವಾಪಾಸ್ ಪಡೆಯುವಂತೆ ಕೇಳಲು ಮನೆಗೆ ಹೋಗಿದ್ದ ಈಶ್ವರಪ್ಪ‌, ಮಾತು ಕೇಳದಿದ್ದಕ್ಕೆ ಚಾಕುವಿನಿಂದ ಚುಚ್ಚಿ ತಂಗಿಯ ಹತ್ಯೆ ಮಾಡಿದ್ದಾನೆ.

ಮೃತ ಮಹಿಳೆ 14 ವರ್ಷದ ಹಿಂದೆ ಕಟಿಂಗ್ ಸಲೂನ್ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ 2020 ರಲ್ಲಿ‌ ಮೈಬೂಬ್ ಬೆಟಗೇರಿ ಎಂಬಾತನ ಜೊತೆ ಎರಡನೇ ಮದುವೆಯಾಗಿ ಜೀವನ ನಿರ್ವಹಣೆಗಾಗಿ ಅಣ್ಣನ 15 ಎಕರೆ ಜಮೀನಿನಲ್ಲಿ ಪಾಲು ಕೇಳಿದ್ದ ಖುರ್ಷಿದಾ, ಕೋರ್ಟ್ ಮೆಟ್ಟಿಲೇರಿದ್ದಳು.

ಈ ಹಿನ್ನಲೆ ಇಂದು ಮನೆಗೆ ಬಂದು ಕೇಸ್ ವಾಪಸ್ ಪಡೆಯವಂತೆ ಅಣ್ಣ ಒತ್ತಾಯ ಮಾಡಿದ್ದಾನೆ. ಆದರೆ, ಅಣ್ಣನ ಮಾತು ಕೇಳದೆ ವಾಗ್ವಾದಕ್ಕಿಳಿದಿದ್ದ ತಂಗಿಗೆ ಚಾಕುವಿನಿಂದ ಆರು ಬಾರಿ ಇರಿದು ಬಳಿಕ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಸಧ್ಯ ಸ್ಥಳಕ್ಕೆ ಗದಗ ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ ಹಾಗೂ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಿ : ಮುತ್ತು ಗೋಸಲ್ 


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!