ಜಿಲ್ಲಾ ಸುದ್ದಿ

ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು – ದಿಂಗಾಲೇಶ್ವರ ಶ್ರೀ.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ:ದಿಂಗಾಲೇಶ್ವರ ಸ್ವಾಮೀಜಿ 

Share News

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ:ದಿಂಗಾಲೇಶ್ವರ ಸ್ವಾಮೀಜಿ 

ಗದಗ:ಸತ್ಯಮಿಥ್ಯ (ಜೂ-14)

‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಉಚಿತ ಯೋಜನೆಗಳು ಆಶ್ರಮದ ಖರ್ಚು ಹೆಚ್ಚಲಿಕ್ಕೆ ಕಾರಣ ಆಗಿವೆ’ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ರಾತ್ರಿ ನಡೆದ ಕೀರ್ತನ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಉಚಿತ ಯೋಜನೆಗಳಿಂದಾಗಿ ಮಠಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಪ್ರಸಾದ ವ್ಯವಸ್ಥೆ ನೂರು ಪಟ್ಟು ಹೆಚ್ಚಾಗಿದೆ. ಸರ್ಕಾರ ಮಾಡುವ ಕೆಲಸವನ್ನೇ ಮಠಗಳು ಮಾಡುತ್ತಿವೆ. ಹಾಗಾಗಿ, ಮಠಗಳ ಸಮಗ್ರ ಬೆಳವಣಿಗೆಗೆ ಅನ್ನ, ಹಣ ನೀಡುವುದು ಸರ್ಕಾರದ ಕೆಲಸ’ ಎಂದರು.

‘ಆದರ್ಶ ಸರ್ಕಾರ ತನ್ನ ಕಿಮ್ಮತ್ತು ಉಳಿಸಿಕೊಳ್ಳಲು ವೀರೇಶ್ವರ ಪುಣ್ಯಾಶ್ರಮದಂತಹ ಸಂಸ್ಥೆಗೆ ಪ್ರತಿ ವರ್ಷ ಕೇಳದೆಯೇ ಅನುದಾನ ನೀಡಬೇಕು. ಈ ನಿಟ್ಟಿನಲ್ಲಿ ಆಡಳಿತಾರೂಢ ಸರ್ಕಾರಗಳು ಗಮನ ಹರಿಸಬೇಕು’ ಎಂದರು.

ವರದಿ : ಮುತ್ತು ಗೋಸಲ್.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!