ಜಿಲ್ಲಾ ಸುದ್ದಿ

ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Share News

ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಗದಗ:ಸತ್ಯಮಿಥ್ಯ (ಆ-04)

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಇಲ್ಲಿನ ಕೆ.ಎಚ್‌.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಗದಗ ಜಿಲ್ಲೆ ನರಗುಂದ ಪಟ್ಟಣದ ಸುಜಾತಾ ಜೋಗಣ್ಣವರ (22) ಮೃತಪಟ್ಟ ಬಾಣಂತಿ.ಹೆರಿಗೆಗಾಗಿ ನರಗುಂದದಿಂದ ಗದಗ ಜಿಲ್ಲಾ ಆಸ್ಪತ್ರೆಗೆ ಸುಜಾತಾ ಅವರನ್ನು ಕರೆತರಲಾಗಿತ್ತು. ಭಾನುವಾರ ಬೆಳಿಗ್ಗೆ ಹೆರಿಗೆಯಾದ ಒಂದು ತಾಸಿನಲ್ಲಿ ಬಾಣಂತಿ ತಲೆ ಸುತ್ತಿ ಬಿದ್ದಿದ್ದಾರೆ. ವೈದ್ಯರು ತಕ್ಷಣ ಚಿಕಿತ್ಸೆ ಕೊಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಬಾಣಂತಿ ಮೃತಪಟ್ಟಿದ್ದಾರೆ’ ಎಂದು ಸಂಬಂಧಿ ದತ್ತು ಜೋಗಣ್ಣವರ ಆರೋಪಿಸಿದ್ದಾರೆ.

‘ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತನಿಧಿ ಕೇಂದ್ರ ಇದ್ದರೂ ರೋಗಿಗಳ ಕಡೆಯವರೇ ರಕ್ತ ಹೊಂದಿಸಬೇಕು ಎಂದು ಆಸ್ಪತ್ರೆಯ ಸಿಬ್ಬಂದಿ ಕಾಡಿಸುತ್ತಾರೆ. ಕಷ್ಟಪಟ್ಟು ರಕ್ತ ಹೊಂದಿಸಿಕೊಟ್ಟರೂ ಬಾಣಂತಿಯನ್ನು ಉಳಿಸಿಕೊಡಲಿಲ್ಲ’ ಎಂದು ದೂರಿದರು.

‘ದೇಹದ ರಕ್ತನಾಳದಲ್ಲಿ ರಕ್ತಸ್ರಾವ ಮತ್ತು ರಕ್ತ ಹೆಪ್ಪುಗಟ್ಟುವಿಕೆಯಿಂದ (ಡಿಐಸಿ) ಬಾಣಂತಿ ಮೃತಪಟ್ಟಿದ್ದಾರೆ. ಗರ್ಭಿಣಿ ಇದ್ದಾಗ ಸರಿಯಾಗಿ ತೋರಿಸಿಕೊಂಡಿಲ್ಲ. ಹೆರಿಗೆಯಲ್ಲಿ ಹೈರಿಸ್ಕ್‌ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಈ ರೀತಿಯ ಸಮಸ್ಯೆ ಕಾರಣಕ್ಕೆ ಹೆರಿಗೆ ಆದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟರು. ಮಗು ಆರೋಗ್ಯದಿಂದ ಇದೆ’ ಎಂದು ಕೆ.ಎಚ್‌.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ವರದಿ : ಮುತ್ತು ಗೋಸಲ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!