
ದೇವದಾಸಿ ಮಹಿಳೆಯರ ಮತ್ತು ಕುಟುಂಬ ಸದಸ್ಯರನ್ನು ಗಣತಿ ಮತ್ತು ಪುನರ್ವಸತಿಗೆ ಆಗ್ರಹ.
ದೇವದಾಸಿ ಮಹಿಳೆಯರು ಹಾಗು ಅವರ ಕುಟುಂಬಗಳ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸಿ ಪುನರ್ವಸತಿಗೆ ಅಗತ್ಯ ಕ್ರಮವಹಿಸಲು ಆಗ್ರಹ.
ಗದಗ/ಸತ್ಯಮಿಥ್ಯ (ಸೆ-30)
ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿಯು ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಗೌರವಾಧ್ಯಕ್ಷ ಬಾಲು ರಾಠೋಡ ಮಾತನಾಡಿ ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ ನಿಷೇದ ಮಸೂದೆ – 2025 ಅಂಗೀಕರಿಸಿರುವುದನ್ನು ಮತ್ತು ಎಲ್ಲ ದೇವದಾಸಿ ಮಹಿಳೆಯರ ಹಾಗು ಅವರ ಮೂರು ತಲೆ ಮಾರುಗಳ ಕುಟುಂಬದ ಸದಸ್ಯರ ಗಣತಿಗೆ ಕ್ರಮ ವಹಿಸಿರುವುದನ್ನು ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿ ಸ್ವಾಗತಿಸುತ್ತದೆ.
ಅದೇ ರೀತಿಯಾಗಿ ಈಗ ಕಾರ್ಯ ನಿರ್ವಹಿಸುವ ಗಣತಿಯಲ್ಲಿ ಈಗಾಗಲೆ ಗಣತಿಪಟ್ಟಿಯಲ್ಲಿರುವ ದೇವದಾಸಿ ಮಹಿಳೆಯರು ಹಾಗು ಕುಟುಂಬದ ಸದಸ್ಯರನ್ನು ವಿಶೇಷವಾಗಿ ಮರು ಸಮೀಕ್ಷೆಗೆ ಕ್ರಮ ವಹಿಸಲಾಗಿದೆ.
ಆದರೆ ಇದುವರೆಗೆ ಗಣತಿಯಲ್ಲಿ ಸೇರಿಸಲಾಗದಿರುವ ದೇವದಾಸಿ ಮಹಿಳೆಯರು ಹಾಗು ಅವರ ಕುಟುಂಬದ ಸಾವಿರಾರು ಸದಸ್ಯರು, ಈ ದೌರ್ಜನ್ಯದ ದೇವದಾಸಿ ಪದ್ಧತಿಗೆ ಹಾಗು ಜಾತಿ ಅಸಮಾನತೆ ಮತ್ತು ಅಶ್ಪೃಶ್ಯಾಚರಣೆಯ ಅಪಮಾನಗಳ ತೀವ್ರ ಶೋಷಣೆಗೆ ಗುರಿಯಾಗಿದ್ದರೂ, ಅವರು ಕೇವಲ ಗಣತಿ ಪಟ್ಟಿಯಲ್ಲಿಲ್ಲವೆಂಬ ಕಾರಣಕ್ಕೆ ದೇವದಾಸಿ ಮಹಿಳೆಯರು ಈಗ ಸಿಗುವ ಯಾವುದೇ ಕನಿಷ್ಠ ಸೌಲಭ್ಯಗಳಕನ್ನು ಪಡೆಯಲಾಗುತ್ತಿಲ್ಲ.
ಜಿಲ್ಲಾಧಿಕಾರಿ ಜೊತೆ ಚರ್ಚೆ ಸಂದರ್ಭ
ಗಣತಿ ಪಟ್ಟಿಯಲ್ಲಿ ಇಲ್ಲ ಎಂಬ ಕಾರಣಕ್ಕೆ ಅವರಿಗೆ, ಅವರ ಮಕ್ಕಳಿಗೆ ದೇವದಾಸಿ ಕುಟುಂಬದ ಸರ್ಟಿಫಿಕೇಟ್ ಕೂಡಾ ಸಿಕ್ಕಿರುವುದಿಲ್ಲ.ಇದರಿಂದ ಸಾವಿರಾರು ಮಕ್ಕಳು ಅವರ ವಿದ್ಯಾಭ್ಯಾಸದ ಹಾಗೂ ಉದ್ಯೋಗದ ಸೌಲಭ್ಯ ವಂಚಿತರಾಗಿದ್ದಾರೆ. ತಾಯಂದಿರು ದೌರ್ಜನ್ಯದಿಂದ ನಲುಗಿದ್ದಾರೆ.
ಆದ್ದರಿಂದ ಗಣತಿ ಪಟ್ಟಿಯಾಚೆ ಇರುವ ಎಲ್ಲ ದೇವದಾಸಿ ಮಹಿಳೆಯರನ್ನು ಅವರ ಮೂರು ತಲೆಮಾರು ಕುಟುಂಬದ ಸದಸ್ಯರನ್ನು ಅತಿ ಶೀಘ್ರವಾಗಿ ಗಣತಿಯಪಟ್ಟಿಗೆ ಸೇರಿಸಲು ವಿಶೇಷ ಕ್ರಮ ವಹಿಸಿ 2026 ರ ಬಜೆಟ್ ನಲ್ಲಿ ಈ ಎಲ್ಲರಿಗೂ ಎಲ್ಲ ದೇವದಾಸಿ ಮಹಿಳೆಯರ ಕುಟುಂಬದಂತೆ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸಲು ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹಕ್ಕುಗಳ ಹೋರಾಟ ಸಮಿತಿ, ಮನವಿ ಮಾಡುತ್ತದೆ ಎಂದರು.
ತಕ್ಷಣದಿಂದಲೆ ಈ ಮಹಿಳೆಯರಿಗೆ ಅವರ ಕುಟುಂಬದ ಸದಸ್ಯರಿಗೆ ದೇವದಾಸಿ ಕುಟುಂಬದ ಸರ್ಟಿಫಿಕೇಟ್ ನೀಡುವಂತೆ ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ಉಪಾಧ್ಯಕ್ಷ ರಾದ ಫಕೀರಮ್ಮ ಪೂಜಾರ ಮಾದೇವಿ ದೋಡ್ಡಮನಿ ಶಿವಕ್ಕ ಮಾದರ . ಮಕ್ಕಳ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರು ಮಲ್ಲಿಕಾರ್ಜುನ ಮಾದರ ಆನಂದ ಮಾದರ ಇದ್ದರು.
ವರದಿ :ಸುರೇಶ ಬಂಡಾರಿ.