ಜಿಲ್ಲಾ ಸುದ್ದಿ

ಹಣ ದುರ್ಬಳಕೆ: ಪಿಡಿಒ ಅಮಾನತು.

Share News

ಹಣ ದುರ್ಬಳಕೆ: ಪಿಡಿಒ ಅಮಾನತು.

ಕವಿತಾಳ (ರಾಯಚೂರು ಜಿಲ್ಲೆ):ಸತ್ಯಮಿಥ್ಯ (ಡಿ -04)

ಹಣ ದುರ್ಬಳಕೆ ಆರೋಪದಡಿ ಜಿಲ್ಲೆಯ ಅಮೀನಗಡ ಗ್ರಾಮ ಪಂಚಾಯಿತಿಯ ಪ್ರಭಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ ಅಮಾನತು ಮಾಡಿದ್ದಾರೆ.

ಸಿಬ್ಬಂದಿ ವೇತನ ಮತ್ತು ರಸ್ತೆ ದುರಸ್ತಿಗೆ ಹಣ ಪಾವತಿ ಮಾಡುವುದಾಗಿ ಹೇಳಿ ತನ್ನ ಡಿಜಿಟಲ್‌ ಸಹಿ ಪಡೆದು ₹5 ಲಕ್ಷ ಡ್ರಾ ಮಾಡಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಅಧ್ಯಕ್ಷೆ ಬಸಲಿಂಗಮ್ಮ ದೂರು ನೀಡಿದ್ದರು.

ಈ ಹಿಂದೆ ಹಾಲಾಪುರ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆಯೂ ರಾಮಪ್ಪ ಅವರ ವಿರುದ್ಧ ಸಾರ್ವಜನಿಕರಿಂದ ದೂರು ಬಂದಿದ್ದವು. ಆ ದೂರುಗಳಿಗೂ ಸಮರ್ಪಕ ಉತ್ತರ ನೀಡದ ಕಾರಣ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.

ವರದಿ :ಶಿವು ರಾಠೋಡ 


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!