
ಬಸ್ ಟಿಕೆಟ್ ದರ ಶೇ 15% ಹೆಚ್ಚಳ – ಸಿದ್ದು ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಹೊರೆ.
ಬೆಂಗಳೂರು: ಸತ್ಯಮಿಥ್ಯ ( ಜ -02).
ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಟಿಕೆಟ್ ದರದ ಹೆಚ್ಚಳವಾಗಲಿದ್ದು ಜನತೆಗೆ ಹೊರೆಯಾಗಲಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.
ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿರುವುದಾಗಿ ತಿಳಿದು ಬಂದಿದೆ.
ವರದಿ : ಚನ್ನು. ಎಸ್.