ಗದಗ – ಗಜೇಂದ್ರಗಡದಲ್ಲಿ ಮೆಟ್ರಿಕ್ ನಂತರದ ಬಾಲಕರ ಹೊಸ ಹಾಸ್ಟೇಲ್ ಪ್ರಾರಂಭಿಸಲು ಎಸ್ ಎಫ್ ಐ ಒತ್ತಾಯ.
ಈ ಮೊದಲು ತಹಸೀಲ್ದಾರ್, ಸ್ಥಳೀಯ ಶಾಸಕ ಮತ್ತು ಸಂಸದ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿ ಸೇರಿದಂತೆ ಎಲ್ಲರಿಗೂ ಮನವಿ ಸಲ್ಲಿಸಲಾಗಿದೆ - ಇವರ್ಯಾರಿಗೂ ವಿದ್ಯಾರ್ಥಿಗಳ ಕಾಳಜಿ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಗದಗ – ಗಜೇಂದ್ರಗಡದಲ್ಲಿ ಮೆಟ್ರಿಕ್ ನಂತರದ ಬಾಲಕರ ಹೊಸ ಹಾಸ್ಟೇಲ್ ಪ್ರಾರಂಭಿಸಲು ಎಸ್ ಎಫ್ ಐ ಒತ್ತಾಯ.
ಗದಗ : ಸತ್ಯಮಿಥ್ಯ ( ಜುಲೈ -16)
ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ) ಗಜೇಂದ್ರಗಡ ತಾಲ್ಲೂಕು ಸಮಿತಿಯ ನೇತೃತ್ವದಲ್ಲಿ ಇಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಗಜೇಂದ್ರಗಡ ನಗರದಲ್ಲಿ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಪ್ರಾರಂಭಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು .
ಈ ಸಂದರ್ಭದಲ್ಲಿ ಎಸ್ ಎಫ್ ಐ ರಾಜ್ಯ ಪದಾಧಿಕಾರಿಗಳಾದ ಗಣೇಶ ರಾಠೋಡ ಮಾತನಾಡಿ ಗಜೇಂದ್ರಗಡ ನಗರವು ಶೈಕ್ಷಣಿಕವಾಗಿ ಬೆಳೆಯುತ್ತಿರುವ ನಗರ ಆಗಿದ್ದು ಇಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಅಂದಾಜು 1500 ಕ್ಕೂ ಹೆಚ್ಚು ಇದೆ. ಅದರ ಜೊತೆಗೆ ನಾಲ್ಕು ಪಿ ಯು ಕಾಲೇಜಗಳು, ಒಂದು ಡಿಪ್ಲೊಮಾ ಕಾಲೇಜ ಹಾಗೇ ನಾಲ್ಕು ಡಿಗ್ರಿ ಕಾಲೇಜುಗಳು ಇವೆ. ಇಲ್ಲಿ ಸುಮಾರು 1200 ಕ್ಕೂ ಅಧಿಕ ವಿದ್ಯಾರ್ಥಿಗಳು ಡಿಗ್ರಿ ಓದುತ್ತಿದ್ದಾರೆ ಇದರಲ್ಲಿ ಅರ್ಧಕ್ಕಿಂತ ಹೆಚ್ಚು ಜನ ಬಾಲಕರು ವಿದ್ಯಾಭ್ಯಾಸ ಮಾಡುತ್ತಿದ್ದು ಇಲ್ಲಿಯವರೆಗೆ ಒಂದೇ ಒಂದು ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಇಲ್ಲದಿರುವುದು ಖೇಧಕರ ಎಂದರು .
ಈ ವಿಚಾರವಾಗಿ ಎಸ್ ಎಫ್ ಐ ನೇತೃತ್ವದಲ್ಲಿ ಕಳೆದ 7-8 ವರ್ಷಗಳಿಂದ ಹೋರಾಟ ಮಾಡಿ ಮನವಿ ಸಲ್ಲಿಸಿದ್ದೆವೆ. ಹಿಂದೆ ಮುಖ್ಯಮಂತ್ರಿಗಳು ಬಂದಾಗ ಅವರಿಗೂ ಮನವಿ ನೀಡಿದ್ದೇವೆ. ಸಹಿ ಸಂಗ್ರಹ ಚಳುವಳಿ ಮಾಡಿ ಜನಾಭಿಪ್ರಾಯ ರೂಪಿಸಿ ಕೂಡಾ ಶಾಸಕರು, ಸಂಸದರುಗಳಿಗೆ ಅಧಿಕಾರಿಗಳಿಗೆ ಮನವಿ, ಹೋರಾಟ, ಒತ್ತಾಯ, ಮಾಡುತ್ತಲೆ ಬಂದರು ಈವರೆಗೂ ಹಾಸ್ಟೆಲ್ ಕೊಡಲು ಸರ್ಕಾರ ಮತ್ತು ಆಡಳಿತ ವರ್ಗಗಳ ಹಿತಾಸಕ್ತಿ ಇಲ್ಲದಿರುವುದು ಸಾಬೀತು ಆಗಿದೆ ಎಂದರು.
ನಂತರ ಎಸ್ ಎಫ್ ಐ ನ ಜಿಲ್ಲಾ ಮುಖಂಡರಾದ ಚಂದ್ರು ರಾಠೋಡ ಮಾತನಾಡಿ ನಿನ್ನೆಯಿಂದ ಮುಂಗಾರು ಅಧಿವೇಶನ ಪ್ರಾರಂಭಗೊಂಡಿದ್ದು ತಾವು ಸರ್ಕಾರದ ಗಮನಕ್ಕೆ ತಂದು ಹಾಸ್ಟೆಲ್ ಮಾಡಿಸಿ ಕೊಡಲು ಈ ಮನವಿಯ ಮೂಲಕ ಒತ್ತಾಸುತ್ತಿದ್ದೆವೆ. ಈ ಹಿಂದೆ ನಾವು ರಾಜ್ಯದಲ್ಲಿ ಹಾಸ್ಟೆಲ್ ಬೇಡಿಕೆ ಇಟ್ಟು ಹೋರಾಟ ಮಾಡಿದಕ್ಕೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ 150 ಕ್ಕೂ ಹೆಚ್ಚು ಹಾಸ್ಟೆಲ್ ಗಳನ್ನು ಪ್ರಾರಂಬಿಸುವ ಪ್ರಸ್ತಾವನೆಗೆ ಸರ್ಕಾರದ ಅಸ್ತು ಹೇಳಿದ್ದು ಗದಗ ಜಿಲ್ಲೆಗೆ ಎರಡು ಹಾಸ್ಟೆಲ್ ನೀಡಿದ್ದಾರೆ ಅದರಲ್ಲಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಕೂಡಾ ಇದ್ದು ಅದನ್ನು ಗಜೇಂದ್ರಗಡದಲ್ಲಿ ಪ್ರಾರಂಭಿಸಲು ಜಿಲ್ಲೆಯ ಇಲಾಖಾಧಿಕಾರಿಗಳಿಗೆ ಆದೇಶಿಸಬೇಕು ಎಂದು ಈ ಮೂಲಕ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ)ಗಜೇಂದ್ರಗಡ ತಾಲ್ಲೂಕು ಸಮಿತಿಯು ತಮ್ಮಲ್ಲಿ ಈ ಮೂಲಕ ಒತ್ತಾಯಿಸುತ್ತದೆ ಎಂದರು.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ಶೈಕ್ಷಣಿಕ ವರ್ಷದಿಂದಲೇ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ನ್ನು ಪ್ರಾರಂಭಿಸಬೇಕು ಇಲ್ಲವಾದಲ್ಲಿ ವಿದ್ಯಾರ್ಥಿಗಳು ಜೊತೆ ಸೇರಿ ಎಸ್ ಎಫ್ ಐ ನೇತೃತ್ವದಲ್ಲಿ ಜುಲೈ 24ರಂದು ನಗರದ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಈ ಮೂಲಕ ಎಚ್ಚರಿಸುತ್ತೆವೆ ಎಂದು ಎಸ್ ಎಫ್ ಐ ತಾಲ್ಲೂಕು ಸಮಿತಿಯು ತಿಳಿಸಿದೆ.
ಈ ಸಂದರ್ಭದಲ್ಲಿ ಎಸ್ ಎಫ್ ಐ ನ ತಾಲ್ಲೂಕು ಅಧ್ಯಕ್ಷರಾದ ಪ್ರದೀಪ್ ಎಂ, ಉಪಾಧ್ಯಕ್ಷರಾದ ಮಾಂತೇಶ, ಮುಖಂಡರಾದ ಅನೀಲ್, ಸುನೀಲ್, ಶರಣು ಮತ್ತು ಇತರರು ಉಪಸ್ಥರಿದ್ದರು.
ವರದಿ : ವಿರೂಪಾಕ್ಷ.