ತಾಲೂಕು

ಮಹಿಳೆ ಇಂದು ಅಬಲೆ ಅಲ್ಲಾ ಸಬಲೆ – ಜ್ಯೋತಿ ಗೊಂಡಬಾಳ (Jyothi Gondabala)

ಮಕ್ಕಳಿಗೆ ಹೆಣ್ಣು ಮತ್ತು ಗಂಡು ಎಂಬ ಬೇಧವನ್ನು ಮಾಡದೆ ಉತ್ತಮವಾದ ಗುಣಾತ್ಮಕ ಶಿಕ್ಷಣವನ್ನು ಕೊಡಿಸಬೇಕು- ಶಾರದಾ ಶಟ್ಟರ.

Share News

ಸ್ತ್ರೀ ಎಲ್ಲ ರಂಗಗಳಲ್ಲಿ ತನ್ನ ಇರುವಿಕೆಯನ್ನು ಪ್ರಸ್ತುತ ಪಡಿಸುವ ಮೂಲಕ ಸರ್ವವ್ಯಾಪಿಯಾಗಿದ್ದಾಳೆ.

ಮಕ್ಕಳಿಗೆ ಹೆಣ್ಣು ಮತ್ತು ಗಂಡು ಎಂಬ ಬೇಧವನ್ನು ಮಾಡದೆ ಉತ್ತಮವಾದ ಗುಣಾತ್ಮಕ ಶಿಕ್ಷಣವನ್ನು ಕೊಡಿಸಬೇಕು- ಶಾರದಾ ಶಟ್ಟರ.

ಕುಷ್ಟಗಿ: ಸತ್ಯ ಮಿಥ್ಯ ( ಜೂ -26)

ಮನೆಯೇ ಮೊದಲ ಪಾಠಶಾಲೆ ಜನನಿ ತಾನೇ ಮೊದಲ ಗುರು ಎನ್ನುವ ದಾರ್ಶನಿಕರ ನುಡಿಯಂತೆ ಮಹಿಳೆ ಸರ್ವವ್ಯಾಪಿ ಮತ್ತು ಮನುಕುಲದ ಹುಟ್ಟಿನಿಂದ ಪಾಲನೆ ಪೋಷಣೆ ಮಾಡುವಲ್ಲಿ ಸ್ತ್ರೀ ಮಾತ್ರ ಗಣನೀಯ .ಪ್ರಸ್ತುತ ಸಂದರ್ಭದಲ್ಲಿ ಹೆಣ್ಣು ಎಲ್ಲ ರಂಗಗಳಲ್ಲಿಯೂ ತನ್ನ ಇರುವಿಕೆಯನ್ನು ತೋರಿಪಡಿಸುತ್ತಿದ್ದಾಳೆ.ಗಂಡು ಹೆಣ್ಣು ಸರಿಸಾಮಾನರು ಎಂಬುವದನ್ನು ಆಧುನಿಕ ಮಹಿಳೆ ತೋರಿಸಿಕೊಟ್ಟಿದ್ದಾಳೆ ಎಂದು ರಾಜ್ಯಯುವ ಪ್ರಶಸ್ತಿ ವಿಜೇತೆ ಜ್ಯೋತಿ ಎಂ. ಗೊಂಡಬಾಳ Jyothi Gundabala ಅಭಿಪ್ರಾಯಪಟ್ಟರು.

ಅವರು ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ದಯಾನಂದಪುರಿ ಕ್ರೀಡೆ, ಸಾಂಸ್ಕೃತೀಕ ಜಾನಪದ ಕಲಾ ಸಂಘ ಹಾಗೂ ಗಾಯತ್ರಿ ಮಹಿಳಾ ಸಂಘ ಸಂಯುಕ್ತಾಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸೀಮಂತ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕಳೆದ ಎರಡು ದಶಕಗಳಿಗೆ ಹೋಲಿಸಿದರೆ ಮಹಿಳೆ ಅಂದು ಸಾಮಾಜಿಕ ಅಭದ್ರತೆಯಲ್ಲಿದ್ದಳು ಕಾನೂನಿನ ಅರಿವು ಕಡಿಮೆ. ಇಂದು ಹಾಗಲ್ಲ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ತನ್ನ ಸಮಸ್ಯೆಗೆ ತಾನೇ ಪರಿಹಾರ ಕಂಡುಕೊಳ್ಳುವಲ್ಲಿ ಸಫಲಳಾಗುತ್ತಿದ್ದಾಳೆ. ಸರ್ಕಾರ ಸಂವಿಧಾನದ ಅರಿವಿಗಾಗಿ ಬಹಳಷ್ಟು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಅದರ ಸದುಪಯೋಗ ಪಡೆದುಕೊಳ್ಳಿ ಎಂದರು.

 ದೌರ್ಜನ್ಯ, ಅತ್ಯಾಚಾರ, ಹಿಂಸೆ, ಸಾಮಾಜಿಕ ಅಸಮಾನತೆಗಳನ್ನು ನೋಡಿದರೆ ನಾವು ನಮಗೆ ಒಂದು ಪ್ರಶ್ನೆಯನ್ನು ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ, ಮಹಿಳೆ ತನ್ನ ಶಕ್ತಿಯನ್ನು ಪ್ರತಿಯೊಂದು ರಂಗದಲ್ಲಿ ತೋರಿಸಲು ಸಿದ್ಧವಾಗಿದ್ದಾಳೆ, ತೋರಿಸುತಿದ್ದಾಳೆ. ಜೊತೆಗೆ ಆಕೆಗೆ ಒಂದಿಷ್ಟು ಕುಟುಂಬದಿಂದ ಸಮಾನತೆ, ಗೌರವ ಅವಕಾಶ ಕೊಟ್ಟಿದ್ದೆ ಆದರೆ ಆಕೆಯೂ ಖಂಡಿತ ಇನ್ನಷ್ಟು ತನ್ನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಲ್ಲಳು. ದೂರದ ಗ್ರಾಮವೊಂದರಲ್ಲಿ ಪ್ರಶಸ್ತಿಯನ್ನು ಪಡೆದಿರುವಂತಹ ಎಲ್ಲ ಮಹಿಳೆಯರು ಒಂದೊಂದು ಕ್ಷೇತ್ರದಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ, ಅವರೊಂದಿಗೆ ತಮಗೂ ಪ್ರಶಸ್ತಿಯನ್ನು ಕೊಟ್ಟಿರುವದು ಸಂತೋಷ ತಂದಿದೆ. ಹಿರಿಯರ ಮಾರ್ಗದರ್ಶನ ಪಡೆಯುವ ಮೂಲಕ ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ದಿ ಹೊಂದಬೇಕು ಎಂದು ಅವರು ಹೇಳಿದರು.

ಅಂಗನವಾಡಿ ಮೇಲ್ವಿಚಾರಕಿ ಅನ್ನಪೂರ್ಣ ಪಾಟೀಲ ಮಾತನಾಡಿ, ದೇಶದಲ್ಲಿ ಇನ್ನೂ ಲಿಂಗ ಅಸಮಾನತೆಯು ಜೀವಂತವಾಗಿದೆ ಇದನ್ನು ಹೊಡೆದೊಡಿಸಲು ಮಹಿಳೆಯರು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯಬೇಕು ಹಾಗೂ ಮಹಿಳಾ ದಿನಾಚರಣೆಗಳು ಕೇವಲ ಆಚರಣೆಗಳಿಗೆ ಮಾತ್ರ ಸೀಮಿತವಾಗಬಾರದು ಸರಕಾರ ಗಂಡು ಹೆಣ್ಣಿಗೆ ಸಮಾನತೆ ಇದೆ ಎಂದು ಹೇಳುತ್ತಿದೆ. ಸಂಪೂರ್ಣವಾಗಿ ಸಮಾನತೆಯು ಸಿಕ್ಕಿಲ್ಲ ವಿವಿಧ ಕ್ಷೇತ್ರಗಳಲ್ಲಿ ಮುಕ್ತವಾಗಿ ಪಾಲ್ಗೊಳ್ಳಲು ಅವಕಾಶ ನೀಡಬೇಕಾಗಿದೆ ಎಂದರು.

 ಕುಷ್ಟಗಿ ಇನ್ನರವೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ ಮಾತನಾಡಿ, ತಮ್ಮ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿರುವದು ಬಹಳ ಸಂತಸದ ಸಂಗತಿಯಾಗಿದೆ. ಮಹಿಳೆಯರು ತಮ್ಮ ಮಕ್ಕಳಿಗೆ ಹೆಣ್ಣು ಮತ್ತು ಗಂಡು ಎಂಬ ಬೇಧವನ್ನು ಮಾಡದೆ ಉತ್ತಮವಾದ ಗುಣಾತ್ಮಕ ಶಿಕ್ಷಣವನ್ನು ಕೊಡಿಸಬೇಕು, ಸಮಾಜದಲ್ಲಿ ಅಭಿವೃದ್ದಿಯ ಪತದತ್ತ ಸಾಗುವಂತೆ ಮಾಡಬೇಕು ಎಂದರು.

 ಆರೋಗ್ಯ ಇಲಾಖೆಯ ಸಲೀಮಾಬೇಗಂ ಅರಗಿದ್ದಿ ಮಾತನಾಡಿ ಗರ್ಭೀಣಿ ಮಹಿಳೆಯರು ಪೌಷ್ಟಿಕ ಆಹಾರವನ್ನು ಸೇವನೆ ಮಾಡಬೇಕು, ಸರಿಯಾದ ಉಪಕ್ರಮಗಳನ್ನು ಅನುಸರಿಸಬೇಕು, ಹೆರಿಗೆಯನ್ನು ಕಡ್ಡಾಯವಾಗಿ ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳಬೇಕು, ಹೆರಿಗೆಗೆ ಕತ್ತರಿ ಪ್ರಯೋಗವಾಗಬಾರದು ಎಂದರು.ಆರೋಗ್ಯವನ್ನು ಸರಿಯಾಗಿ ನೋಡಿಕೊಳ್ಳಬೇಕು, ಅದಕ್ಕೆ ನಿಯಮಿತ ವ್ಯಾಯಾಮ ಉತ್ತಮ ಆಹಾರ, ಒಳ್ಳೆಯ ಸಮಾಧಾನದ ಮನಸ್ಥಿತಿ ಹೊಂದಿರಬೇಕು ಎಂದರು.

 ಕಾರ್ಯಕ್ರಮದಲ್ಲಿ ಶಿಕ್ಷಕ ನಟರಾಜ ಸೋನಾರ್, ಪ್ರಗತಿಪರ ಚಿಂತಕ ಮಂಜುನಾಥ ಜಿ. ಗೊಂಡಬಾಳ, ಸಿದ್ರಾಮಪ್ಪ ಅಮರಾವತಿ ಮಾತನಾಡಿದರು. ಈ ಸಂದರ್ಭದಲ್ಲಿ ಕುಷ್ಟಗಿ ಪಟ್ಟಣ ಸಹಕಾರ ಬ್ಯಾಂಕಿನ ಉಪಾಧ್ಯಕ್ಷೆ ಭುವನೇಶ್ವರಿ ಹಿರೇಮಠ, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ರವೀಂದ್ರ ನಂದಿಹಾಳ, ಮಂಜೂರು ಇಲಾಹಿ ಬನ್ನು, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ಕಂಟ್ಲಿ, ಸಂಘಟಕ ಪರಮಶಿವಮೂರ್ತಿ, ಪೂರ್ಣಿಮಾ ದೇವಾಂಗಮಠ, ಗಾಯತ್ರಿ ಕುದುರಿಮೋತಿ, ಶಂಕ್ರಮ್ಮ ಕೊಳ್ಳಿ, ಶ್ರೀನಿವಾಸ ಕಂಟ್ಲಿ, ನಾಗರಾಜ ಕಾಳಗಿ, ರುಕ್ಮೀಣಿ ನಾಗಶೆಟ್ಟಿ, ಶಶಿಕಲಾ ಅರಳಿಕಟ್ಟಿ, ಅಮರೇಶ ತಾರಿವಾಳ, ನಬಿಸಾಬ ಇಲಕಲ್ ಇದ್ದರು.

ವರದಿ : ಮಲ್ಲಿಕಾರ್ಜುನ ಹಿರೇಮಠ್.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!