
ಬೆಂಗಳೂರಿನಿಂದ ಗದಗಕ್ಕೆ ವೋಲ್ವೊ ಬಸ್ ಸೇವೆ ಪುನಾರಂಭಿಸಿ:ಕ್ರಿಕೆಟಿಗ ಸುನೀಲ್ ಜೋಶಿ
ಗದಗ:ಸತ್ಯಮಿಥ್ಯ (ಆಗಸ್ಟ್ -20).
ಬೆಂಗಳೂರಿನಿಂದ ಗದಗಕ್ಕೆ ವೋಲ್ವೊ ಬಸ್ ಸೇವೆ ಪುನಾರಂಭ ಮಾಡುವಂತೆ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಈ ಹಿಂದೆ ಸುನೀಲ್ ಜೋಶಿ ಅವರ ಮನವಿಯ ಮೇರೆಗೆ ಸಾರಿಗೆ ಇಲಾಖೆ ಗದಗದಿಂದ ಬೆಂಗಳೂರಿಗೆ ವೋಲ್ವೊ ಬಸ್ ಸೇವೆಯನ್ನು ಆರಂಭಿಸಿತ್ತು.
2023ರಲ್ಲಿ ಸುನೀಲ್ ಜೋಶಿ, ವೋಲ್ಟೊ ಬಸ್ ಸೇವೆ ಒದಗಿಸುವಂತೆ ಸರ್ಕಾರಕ್ಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (2003) ಅವರಿಗೆ ನನ್ನದೊಂದು ಮನವಿ. ಬೆಂಗಳೂರಿನಿಂದ ಗದಗಕ್ಕೆ ವೋಲ್ವೊ ಬಸ್ನ ಅಗತ್ಯವಿದೆ. ಇದಕ್ಕಾಗಿ ನಾವು 25 ವರ್ಷಗಳಿಂದ ಕಾಯುತ್ತಿದ್ದೇವೆ. ಗದಗಕ್ಕೆ ಐರಾವತ ಬಸ್ ಸೇವೆ ನೀಡಲು ಇದು ಸಕಾಲ’ ಎಂದು ಅವರು ಪೋಸ್ಟ್ ಮಾಡಿದ್ದರು.
ಅವರ ಮನವಿಗೆ ಸ್ಪಂದಿಸಿದ್ದ ಅಂದಿನ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಬಸ್ ಸೇವೆ ಕಲ್ಪಿಸಿದ್ದರು. ಆದರೆ ಕೆಲ ತಿಂಗಳ ನಂತರ ಸಾರಿಗೆ ಸೇವೆ ಸ್ಥಗಿತಗೊಂಡಿದೆ. ಹೀಗಾಗಿ ಅವರು ಬಸ್ ಸೇವೆ ಪುನಾರಂಭ ಮಾಡುವಂತೆ ಮತ್ತೆ ಮನವಿ ಮಾಡಿದ್ದಾರೆ.
ವರದಿ : ಮುತ್ತು