ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ವಿವಿಧ ಕೌಶಲ್ಯಗಳನ್ನು ಕಲಿಯುವ ಅವಶ್ಯಕತೆ ಇದೆ- ಡಾ.ಇಬ್ರಾಹಿಂ.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ವಿವಿಧ ಕೌಶಲ್ಯಗಳನ್ನು ಕಲಿಯುವ ಅವಶ್ಯಕತೆ ಇದೆ- ಡಾ.ಇಬ್ರಾಹಿಂ.
ಗಜೇಂದ್ರಗಡ:ಸತ್ಯಮಿಥ್ಯ (ಮಾ-28)
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ವಿವಿಧ ಕೌಶಲ್ಯಗಳನ್ನು ಕಲಿಯುವ ಅವಶ್ಯಕತೆ ಇದೆ ಎಂದು ಡಾ. ಇಬ್ರಾಹಿಂ ನುಡಿದರು.
ಅವರು ಇಂದು ಸ್ಥಳೀಯ ಎಸ್. ಬಿ. ಎಸ್. ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಎರಡು ದಿನದ ವ್ಯಕ್ತಿತ್ವ ವಿಕಾಸನ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಒಳ್ಳೆಯ ಶಿಕ್ಷಣದಿಂದ ವಿದ್ಯಾರ್ಥಿಗಳ ವ್ಯಕಿತ್ವ ವಿಕಾಸಗೊಳ್ಳುತ್ತದೆ. ಇದಕ್ಕೆ ಉತ್ತಮ ಉಪನ್ಯಾಸಕರ ಮಾರ್ಗದರ್ಶನ ದೊರೆತರೆ ಅದ್ಬುತ ವ್ಯಕ್ತಿತ್ವ ರೂಪಗೊಳ್ಳುತ್ತದೆ ಎಂದರು.
ಮಾರ್ಚ್ 28 ಮತ್ತು 29 ಎರಡು ದಿನ ನಡೆಯುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಮಹೇಂದ್ರ.ಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಂಚಾಲಕರಾದ ಹನುಮೇಶ, ರಾಜ್ಯದ ವಿವಿಧ ಕಾಲೇಜುಗಳಿಂದ ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಡಾ. ಪಿ.ಎಚ್. ಕ್ಯಾರಕೊಪ್ಪ, ಶ್ರೀಮತಿ ಉಮಾ ಪೂಜಾರ, ಡಾ. ಪ್ರಶಾಂತ ಅದರಕಟ್ಟಿ, ರವಿ, ಅನಿಲಕುಮಾರ, ಡಾ. ನಾಗರಾಜ ದಂಡೋತಿ, ಬಿ.ವಿ. ಮುನವಳ್ಳಿ, ಪ್ರಾಧ್ಯಾಪಕರಾದ ಡಾ.ಎಂ.ವಾಯ್.ಜೆಟ್ಟೆಣ್ಣನವರ್, ಪಿ.ಡಿ.ದಿವಾನದ ಹಾಗೂ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಅಜಿತಕುಮಾರ ಕಾರ್ಯಕ್ರಮವನ್ನು ನಿರೂಪಿಸಿದರು, ಮಂಜುನಾಥ ಸ್ವಾಗತಿಸಿದರು ಹಾಗೂ ಜಗದೀಶ ಬೂದಿಹಾಳ ವಂದಿಸಿದರು.
ವರದಿ : ಸುರೇಶ ಬಂಡಾರಿ.